Select Location
All Locations
State
Region
City / District
‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಮಾಡಲು ಬಿಡಲ್ಲ: ವಾಟಾಳ್ ಕ್ಯಾತೆ

‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ಮಾಡಲು ಬಿಡಲ್ಲ: ವಾಟಾಳ್ ಕ್ಯಾತೆ

Jana Nayagan movie: ಐಪಿಎಲ್ ಮುಗಿದಿದ್ದು, ಸಾಲು-ಸಾಲು ಸಿನಿಮಾಗಳು ಬಿಡುಗಡೆಗೆ ತಯಾರಾಗುತ್ತಿವೆ. ಅವುಗಳಲ್ಲಿ ಕೆವಿಎನ್ ನಿರ್ಮಾಣದ ತಮಿಳುನಾಡಿ ಸಿಎಂ ವಿಜಯ್ ನಟನೆಯ ‘ಜನ ನಾಯಗನ್’ ಸಹ ಒಂದು. ಆದರೆ ಇದೀಗ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ್ ಮಾತನಾಡಿ, ತಾವು ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಬಿಡುಗಡೆಗೆ ತಡೆಯುತ್ತೇವೆ ಎಂದಿದ್ದಾರೆ.

ಪ್ಯಾನ್ ಇಂಡಿಯಾ (Pan India) ಜಮಾನಾನಲ್ಲಿ ಒಂದು ರಾಜ್ಯದ ಸಿನಿಮಾ ಮತ್ತೊಂದು ರಾಜ್ಯದಲ್ಲಿ ಬಿಡುಗಡೆ ಆಗುವುದು ಸಾಮಾನ್ಯ ವಿಷಯ ಎಂದಾಗಿದೆ. ಕರ್ನಾಟಕವಂತೂ ಪ್ಯಾನ್ ಇಂಡಿಯಾ ಮಾರುಕಟ್ಟೆಯ ಬಲು ಪ್ರಮುಖ ನಗರವಾಗಿದೆ. ಐಪಿಎಲ್ ಮುಗಿದಿದ್ದು, ಸಾಲು-ಸಾಲು ಸಿನಿಮಾಗಳು ಬಿಡುಗಡೆಗೆ ತಯಾರಾಗುತ್ತಿವೆ. ಅವುಗಳಲ್ಲಿ ಕೆವಿಎನ್ ನಿರ್ಮಾಣದ ತಮಿಳುನಾಡಿ ಸಿಎಂ ವಿಜಯ್ ನಟನೆಯ ‘ಜನ ನಾಯಗನ್’ ಸಹ ಒಂದು. ಆದರೆ ಇದೀಗ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ್ ಮಾತನಾಡಿ, ತಾವು ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಬಿಡುಗಡೆಗೆ ತಡೆಯುತ್ತೇವೆ ಎಂದಿದ್ದಾರೆ.

ಇಂದು (ಜೂನ್ 05) ಮಾಧ್ಯಮಗಳ ಜೊತೆಗೆ ಮಾತನಾಡಿದ ವಾಟಾಳ್ ನಾಗರಾಜ್, ‘ಈಗಿನ ತಮಿಳುನಾಡು ಮುಖ್ಯಮಂತ್ರಿ ವಿಜಯ್, ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅವರು ನಟರಾಗಿದ್ದವರು ಈಗ ಅಧಿಕಾರಕ್ಕೆ ಬಂದಿದ್ದಾರೆ. ನಟನೆ ಮಾಡುವುದು ಸುಲಭ ಆದರೆ ಅಧಿಕಾರ ನಡೆಸುವುದು ಕಷ್ಟ. ಮೇಕೆದಾಟಿಗೆ ವಿರೋಧ ಮಾಡಿದರೆ ಕರ್ನಾಟಕದಲ್ಲಿ ಅವರ ಯಾವುದೇ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಲ್ಲ’ ಎಂದು ವಾಟಾಳ್ ಹೇಳಿದ್ದಾರೆ.

Source : TV9 Kannada

1 hour ago

Home Flash News